24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya
error: Content is protected !!