September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
error: Content is protected !!