July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ಸನಾತನ ಧರ್ಮ ಸೂರ್ಯ ಚಂದ್ರರಿರುವರೆಗೆ ಶಾಶ್ವತವಾಗಿ ಇರಲಿದೆ ಶ್ರೀಕೃಷ್ಣನ ಜೀವನಾದರ್ಶ ಮನಕುಲಕ್ಕೆ ಪಾಲನಯೋಗ್ಯವಾಗಿದ್ದು ತಾವೆಲ್ಲರೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪರಮಾತ್ಮನ ಅನುಗ್ರಹ ನಮಗೆ ಸಿಗಲಿದೆ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಶಿಕ್ಷಕ ರಾಧಕೃಷ್ಣ ಅಡ್ಯಂತಾಯ ಹೇಳಿದರು.

ಅವರು ಸೆ 6 ರಂದು ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ. ಶ್ರೀ ಕೃಷ್ಣ ಮಹಿಳಾ ಸಮಿತಿ ಪಣಕಜೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಸೋಣಂದೂರು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪಣಕಜೆ ಖಂಡ ಸಮಿತಿ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ‌ ಸಂಪತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂ ಅಧ್ಯಕ್ಷ ಪುನಿತ್ ಕುಮಾರ್. ಪುತ್ತೂರು ಜಿಲ್ಲಾ ಭಜರಂಗದಳ ಸಂಯೋಜಕ ಭರತ್ ಕು‌ಮುಡೇಲು, ಮಂಗಳೂರು ಮೆಸ್ಕಾಂ ಮಾಜಿ ನಿರ್ಧಶಕ ಕಿಶೋರ್ ಕುಮಾರ್ ಪುತ್ತೂರು, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ‌ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಉದ್ಯಮಿ  ಕಿರಣ್ ಕುಮಾರ್ ಹೊಕ್ಕಾಡಿಗೋಳಿ ಅರಂಬೋಡಿ ಅಗಮಿಸಿದ್ದರು.

ಮೂಡುಮನೆ ಶ್ರೀನಿವಾಸ ಅಮ್ಮುಣ್ಣಾಯ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಅಟೋಟ ಸ್ಪರ್ಧೆ ಮುದ್ದು ಕೃಷ್ಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀ ಕೃಷ್ಣ ಭಜನಮಂದಿರದಲ್ಲಿ ಕೃಷ್ಣಾಷ್ಟಮಿಯಂದು ಉತ್ತಮ ಅಂಕ ಪಡೆದ ಅನ್ವಿತಾ.ವಿ. ಸಾಲ್ಯಾನ್ ಪಣಕಜೆ, ಪವನ್ ಪಾಲು ಮನೆ, ಅಭಿಷೇಕ್ ನಾಯಕ್ ಪಣಕಜೆ ಸನ್ಮಾನಿಸಲಾಯಿತು.

ಪದ್ಮನಾಭ ಶೆಟ್ಟಿ ಅರ್ಕಜೆ ಸ್ವಾಗತಿಸಿ, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.  ಸಾಂಸ್ಕ್ರತಿಕ ಕಾರ್ಯಕ್ರಮ ನಮ್ಮ ಕುಡ್ಲ ಯಕ್ಷ ತೆಲಿಕೆ ಕಲಾವಿದರು ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರತ್ಯದಲ್ಲಿ ಯಕ್ಷ ತೆಲಿಕೆ ಯಕ್ಷ ಹಾಸ್ಯ ವೈಭವ ಜರಗಿತು.  ಸಾಯಂಕಾಲ ಸ್ಥಳೀಯ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಮುಂಡಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಬಿ ಶೆಟ್ಟಿ ಪೆರಂಗೋಡಿ, ಕಾರ್ಯದರ್ಶಿ ಸುದೀಪ್ ಕುಲಾಲ್ ಭಂಡಾರದಕೊಟ್ಯ, ಕೋಶಾಧಿಕಾರಿ ಅಭಿಲಾಷ್ ಆಚಾರ್ಯ ಪೊಮ್ಮಾಜೆ, ಶ್ರೀ ಕೃಷ್ಣ ಮಹಿಳಾ ಸಮಿತಿ ಅಧ್ಯಕ್ಷೆ ಅಶ್ವಿನಿ ನಾಯಕ್ ಪಣಕಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜೆನೆ ಸೇವಾ ಪ್ರತಿನಿಧಿ ಆನಂದ ಪೂಜಾರಿ ಬರಮೇಲು ಮತ್ತು ಪುಷ್ಪಾ ಕೃಷ್ಣನಗರ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. 

Related posts

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!