July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವು ಅತ್ಯಂತ ಅದ್ದೂರಿಯಾಗಿ ಜರುಗಿತು.

ನಾಗೇಶ್ ಪೂಜಾರಿ, ಆದೇಲು ಇವರ ಅಧ್ಯಕ್ಷತೆಯಲ್ಲಿ ಕುಣಿತ ಭಜನೆ, ಹಲವಾರು ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ನೂರಾರು ಭಕ್ತರು, ಕಲಾಭಿಮಾನಿಗಳು, ಕ್ರೀಡಾಸಕ್ತರು, ಸಾರ್ವಜನಿಕರು ಭಾಗವಹಿಸಿದ್ದರು. ಒಟ್ಟು 160ಕ್ಕಿಂತಲೂ ಹೆಚ್ಚು ಸ್ಪರ್ಧಾ ವಿಜೇತರು ಬಹುಮಾನ ಸ್ವೀಕರಿಸಿ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡರು. ಸ್ಪರ್ಧೆಗಳಲ್ಲಿ ಮಲ್ಲ ಕಂಬ ಸ್ಪರ್ಧೆ, ಭಗವದದ್ಗೀತಾ ಶ್ಲೋಕ ಪಠಣ, ಶ್ರೀ ಕೃಷ್ಣಾ ಲೀಲಾ ಕಥೆ ಶ್ರೀ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಗಳು ಬಾಲಕೃಷ್ಣ ವೇಷ, ಯಶೋಧೆ ಮತ್ತು ಕೃಷ್ಣ ವಿಶೇಷವಾಗಿ ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ , ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಕಾಲೇಜು ಗುರುವಾಯನಕೆರೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಯುವಜನ ಸೇವಾ ಸಮಿತಿ ಅಧ್ಯಕ್ಷ ರಮಾನಂದ ಸಾಲಿಯಾನ್, ಎಸ್‌ಕೆಡಿಆರ್‌ಡಿಪಿ ಯ ಕೃಷಿ ಅಧಿಕಾರಿ ಕೃಷ್ಣಾನಂದ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಜೈನ್ ಉಪಸ್ಥಿತರಿದ್ದು ಶುಭ ಹಾರೈಸಿದರು.

2022-23ನೇ ಸಾಲಿನ ಅತ್ಯುತ್ತಮ ಶಾಲಾ ಶಿಕ್ಷಕ ಪ್ರಶಸ್ತಿ ಪಡೆದಿದ್ದ ಬಿ.ಎಸ್ ಬಿರಾದಾರ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಸದಸ್ಯರಾದ ರಾಜೇಶ್ ಪೂಜಾರಿ ಆದೇಲು ನಿರೂಪಿಸಿ, ಹಿರಿಯ ಸದಸ್ಯರಾದ ಶಾಂತಿರಾಜ ಜೈನ್ ಸ್ವಾಗತಿಸಿ, ಶಿಕ್ಷಕ ಜಗನ್ನಾಥ್ ಇವರು ಧನ್ಯವಾದವಿತ್ತರು. ಸಮನ್ವಿತ್ ಎನ್ ಭಂಡಾರಿ ಪ್ರಾರ್ಥನೆಗೈದರು. ಉಪಾಧ್ಯಕ್ಷ ಜೀವನ್ ಕುಲಾಲ್, ಮಾಜಿ ಅಧ್ಯಕ್ಷರಾದ ಯತೀಶ್ ಸಿರಿಮಜಲು, ಚಂದ್ರಶೇಖರ ಕುಲಾಲ್, ಜೀವನ್ ಕುಲಾಲ್. ಹರೀಶ್ ಸಪಲ್ಯ, ಕೋಶಾಧಿಕಾರಿ ರಾಹುಲ್ ಶೆಟ್ಟಿ ಬೆಂಗತ್ಯಾರು ಮತ್ತು ಎಲ್ಲಾ ಸಂಘದ ಸದಸ್ಯರು ಕಾರ್ಯಕ್ರಮಗಳನ್ನು ಸಂಘಟಿಸಿ ಸಹಕರಿಸಿದರು. ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಬಹಳಷ್ಟು ಸಂಖ್ಯೆಯ ಸ್ಪರ್ಧಿಗಳು ಸ್ಪರ್ಧಿಸಿ ಮುದ ನೀಡಿದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!