ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ ಸಾಲಿನಲ್ಲಿ ಸಂಘವು ಮಾಡಿರುವ ಗಣನೀಯ ಸಾಧನೆಗೆ ಕರ್ನಾಟಕ ರಾಜ್ಯ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಅಧ್ಯಕ್ಷ ಹರೀಶ್ ಸಾಲ್ಯಾನ್ ಮೊರ್ತಾಜೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಹಾಗೂ ನಿರ್ದೇಶಕ ರಮೇಶ್ ಕೆಂಗಾಜೆ ರವರು ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕಿನ ನಿರ್ದೇಶಕರಾದ ವಿನಯ ಚಂದ್ರ, ಸಿಬ್ಬಂದಿಗಳಾದ ರಮಾನಂದ, ಬಾಲಕೃಷ್ಣ, ಚರಣ್ ಉಪಸ್ಥಿತರಿದ್ದರು.

Leave a Comment

error: Content is protected !!