22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಸುಲ್ಕೇರಿ : ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಸೆ 8 ರಂದು ಮಂಗಳೂರು ರಿಫೈನರ್ ಎಂಡ್ ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL)ಮಂಗಳೂರು ರವರು ಸಿಎಸ್ಆರ್ ಫಂಡ್ ಮೂಲಕ 50 ಲಕ್ಷ ಮೌಲ್ಯದ 4 ಕೊಠಡಿಗಳನ್ನು ನೀಡಿದ್ದು ಆ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ ನೆರವೇರಿಸಿ, ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಯಾನಂದ ಪ್ರಭು, ಮ್ಯಾನೇಜರ್ ಮಾರ್ಕೆಟಿಂಗ್ ಆಪರೇಷನ್, ಎಮ್ ಆರ್ ಪಿಎಲ್ ಮಂಗಳೂರು, ವಿಧಾನ ಪರಿಷತ್ ಬೆಳ್ತಂಗಡಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಡಾ. ಸೂರ್ಯಕಾಂತ ಪೈ ,ಖ್ಯಾತ ದಂತ ವೈದ್ಯರು ಮಂಗಳೂರು ಉಪಸ್ಥಿತರಿದ್ದರು. ಎಮ್ ಆರ್ ಪಿಎಲ್ ನ ಸಮಾಜಕ್ಕೆ ನಿಷ್ಠಾವಂತರಾಗಿ ಚಿಂತನೆ ಮಾಡುವಂತಹ ಮೌಲ್ಯ ಸಿಗುವುದು ಶಾಲೆಗಳಿಂದ ಮಾತ್ರ ಎಂದು ತಿಳಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಡಾ.ಪ್ರಭಾಕರ್ ಭಟ್, ಕಲ್ಲಡ್ಕ ಇವರು ನಮ್ಮ ದೇಶದ ಸಂಸ್ಕೃತಿ ಚರಿತೆಯನ್ನು ಇವತ್ತಿನ ಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ, ಮಕ್ಕಳು ತಂದೆ ತಾಯಿ ಸಮಾಜವನ್ನು ಗೌರವಿಸುವಂತಾಗಲು ಗುಣಮಟ್ಟದ ಶಿಕ್ಷಣವನ್ನು ಚಿಕ್ಕವಯಸ್ಸಿನಿಂದಲೇ ಕೊಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜ ಪೂಜಾರಿ ಸ್ವಾಗತಿಸಿದರು, ಶಿಲ್ಪಾ ಮಾತಾಜಿ ವಂದಿಸಿದರು, ಶ್ರೀಮತಿ ಹೇಮಲತ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!