23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಸುಲ್ಕೇರಿ : ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಸೆ 8 ರಂದು ಮಂಗಳೂರು ರಿಫೈನರ್ ಎಂಡ್ ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL)ಮಂಗಳೂರು ರವರು ಸಿಎಸ್ಆರ್ ಫಂಡ್ ಮೂಲಕ 50 ಲಕ್ಷ ಮೌಲ್ಯದ 4 ಕೊಠಡಿಗಳನ್ನು ನೀಡಿದ್ದು ಆ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ ನೆರವೇರಿಸಿ, ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಯಾನಂದ ಪ್ರಭು, ಮ್ಯಾನೇಜರ್ ಮಾರ್ಕೆಟಿಂಗ್ ಆಪರೇಷನ್, ಎಮ್ ಆರ್ ಪಿಎಲ್ ಮಂಗಳೂರು, ವಿಧಾನ ಪರಿಷತ್ ಬೆಳ್ತಂಗಡಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಡಾ. ಸೂರ್ಯಕಾಂತ ಪೈ ,ಖ್ಯಾತ ದಂತ ವೈದ್ಯರು ಮಂಗಳೂರು ಉಪಸ್ಥಿತರಿದ್ದರು. ಎಮ್ ಆರ್ ಪಿಎಲ್ ನ ಸಮಾಜಕ್ಕೆ ನಿಷ್ಠಾವಂತರಾಗಿ ಚಿಂತನೆ ಮಾಡುವಂತಹ ಮೌಲ್ಯ ಸಿಗುವುದು ಶಾಲೆಗಳಿಂದ ಮಾತ್ರ ಎಂದು ತಿಳಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಡಾ.ಪ್ರಭಾಕರ್ ಭಟ್, ಕಲ್ಲಡ್ಕ ಇವರು ನಮ್ಮ ದೇಶದ ಸಂಸ್ಕೃತಿ ಚರಿತೆಯನ್ನು ಇವತ್ತಿನ ಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ, ಮಕ್ಕಳು ತಂದೆ ತಾಯಿ ಸಮಾಜವನ್ನು ಗೌರವಿಸುವಂತಾಗಲು ಗುಣಮಟ್ಟದ ಶಿಕ್ಷಣವನ್ನು ಚಿಕ್ಕವಯಸ್ಸಿನಿಂದಲೇ ಕೊಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜ ಪೂಜಾರಿ ಸ್ವಾಗತಿಸಿದರು, ಶಿಲ್ಪಾ ಮಾತಾಜಿ ವಂದಿಸಿದರು, ಶ್ರೀಮತಿ ಹೇಮಲತ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya
error: Content is protected !!