September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಸುಲ್ಕೇರಿ : ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಸೆ 8 ರಂದು ಮಂಗಳೂರು ರಿಫೈನರ್ ಎಂಡ್ ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL)ಮಂಗಳೂರು ರವರು ಸಿಎಸ್ಆರ್ ಫಂಡ್ ಮೂಲಕ 50 ಲಕ್ಷ ಮೌಲ್ಯದ 4 ಕೊಠಡಿಗಳನ್ನು ನೀಡಿದ್ದು ಆ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ ನೆರವೇರಿಸಿ, ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಯಾನಂದ ಪ್ರಭು, ಮ್ಯಾನೇಜರ್ ಮಾರ್ಕೆಟಿಂಗ್ ಆಪರೇಷನ್, ಎಮ್ ಆರ್ ಪಿಎಲ್ ಮಂಗಳೂರು, ವಿಧಾನ ಪರಿಷತ್ ಬೆಳ್ತಂಗಡಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಡಾ. ಸೂರ್ಯಕಾಂತ ಪೈ ,ಖ್ಯಾತ ದಂತ ವೈದ್ಯರು ಮಂಗಳೂರು ಉಪಸ್ಥಿತರಿದ್ದರು. ಎಮ್ ಆರ್ ಪಿಎಲ್ ನ ಸಮಾಜಕ್ಕೆ ನಿಷ್ಠಾವಂತರಾಗಿ ಚಿಂತನೆ ಮಾಡುವಂತಹ ಮೌಲ್ಯ ಸಿಗುವುದು ಶಾಲೆಗಳಿಂದ ಮಾತ್ರ ಎಂದು ತಿಳಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಡಾ.ಪ್ರಭಾಕರ್ ಭಟ್, ಕಲ್ಲಡ್ಕ ಇವರು ನಮ್ಮ ದೇಶದ ಸಂಸ್ಕೃತಿ ಚರಿತೆಯನ್ನು ಇವತ್ತಿನ ಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ, ಮಕ್ಕಳು ತಂದೆ ತಾಯಿ ಸಮಾಜವನ್ನು ಗೌರವಿಸುವಂತಾಗಲು ಗುಣಮಟ್ಟದ ಶಿಕ್ಷಣವನ್ನು ಚಿಕ್ಕವಯಸ್ಸಿನಿಂದಲೇ ಕೊಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜ ಪೂಜಾರಿ ಸ್ವಾಗತಿಸಿದರು, ಶಿಲ್ಪಾ ಮಾತಾಜಿ ವಂದಿಸಿದರು, ಶ್ರೀಮತಿ ಹೇಮಲತ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!