28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವು ಸೆ.9 ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು  ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು.

“ನಮ್ಮ ಜೀವನದ ಮೇಲೆ ಸಂಸ್ಕೃತವು ಬೀರುವ ಪ್ರಭಾವದ ಅಗಾಧತೆಯು ನಾನು ದೇವಸ್ಥಾನಕ್ಕೆ ಮಣೆಗಾರನಾಗಿ ಸೇರಿದ ಮೇಲೆ ನನಗೆ ಮನವರಿಕೆಯಾಯಿತು” ಎಂದ ಅವರು, “ಉಜಿರೆ ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ವಿಭಾಗ ಅತ್ಯುತ್ತಮ ಕಾರ್ಯಕ್ರಮ ಆಯೋಜನೆ ಮಾಡಿದೆ” ಎಂದು ಶ್ಲಾಘಿಸಿದರು.

“ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಸಂಸ್ಕೃತಕ್ಕೆ ಇಂದು ಮಹತ್ವ ಪ್ರಾಪ್ತಿಯಾಗಿದೆ. ಭಾರತೀಯ ಬೃಹತ್ ಗ್ರಂಥಗಳ ಮೂಲ ಸಂಸ್ಕೃತ ಭಾಷೆಯಾಗಿದ್ದು, ದೇವರ ಭಾಷೆಯೂ ಆಗಿದೆ”

ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಹೇಳಿದರು.

ವಿದ್ಯಾರ್ಥಿಗಳು ನೃತ್ಯ, ಗಾಯನ, ಯೋಗ, ನಾಟಕ, ನಾಟ್ಯ ಕಲೆಗಳ ‘ಸಂಸ್ಕೃತಸಂಧ್ಯಾ’ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಡಾ. ರಾಮಚಂದ್ರ ಪುರೋಹಿತ ಮತ್ತು ಇತರ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಿಂಚನ ವಂದಿಸಿ, ಮೇಘಾ ನಿರೂಪಿಸಿದರು.

Related posts

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!