25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಸೆ.7 ಮತ್ತು 8 ರಂದು ಜರುಗಿತು.

ಕಳೆದ 12 ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆದಿದ್ದು ಮುಂದಿನ ವರ್ಷ ಪುನರ್ ಪ್ರತಿಷ್ಠಾ ಅಷ್ಟಬಂಧ ನಡೆಯಲಿದ್ದು, ಇದರ ಅಂಗವಾಗಿ ಪ್ರಶ್ನಾಚಿಂತನೆ ನಡೆಯಿತು. ಪ್ರಸಾದ್ ಜೋತಿಷ್ಯ ಅನುವಾದಕರು, ಅನಂತೋಡಿ ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಸ್ಥಳೀಯ ಜೋತಿಷ್ಯರಾದ ಸತ್ಯ ಶಂಕರ ಮಯ್ಯಬೈಪಾಡಿ ದೇವಸ್ಥಾನದ ಅರ್ಚಕರಾದ ಪ್ರಶಾಂತ್ ಹೊಳ್ಳ ಉಪಸ್ಥಿತರಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತಸರರಾದ ಕುಕ್ಕಪ್ಪ ಗೌಡ ತಾರೆಕೆರೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ,ಕಾರ್ಯದರ್ಶಿ ಉಮೇಶ್ ಗೌಡ , ಸದಸ್ಯರಾದ ರಮೇಶ್ ಗೌಡ ಅಡ್ರೆಂಕಿಮಜಲು, ದೇಜಪ್ಪ ಗೌಡ ಪಯ್ಯಾಡಿ, ಲಕ್ಷ್ಮೀಕಾಂತ ಕೀಲಾರು, ದಿನೇಶ್ ನಾಯ್ಕ ಭಾರತಿ ಬಾಲಂಪಾಡಿ, ಯಶೋಧ ಅಡ್ಡಾರು, ಹರೀಶ್ ಗೌಡ ಕೋಡಿಮಜಲು, ನಿರ್ಮಲ್ ಕುಮಾರ್, ಮೋನಪ್ಪ ಗೌಡ ನೆಲ್ಲಿಂಗೆರು, ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ ಸೋನಕುಮೇರು, ಕಾರ್ಯದರ್ಶಿ ಹರೀಶ್ ಗೌಡ ಪರಪಾಜೆ ಕೇಶವ ಗೌಡ ಕೊಂಗುಜೆ, ಹಿರಿಯರಾದ ಧರ್ಣಪ್ಪ ಗೌಡ ಬಾನಡ್ಕ ಹೊನ್ನಪ್ಪ ಗೌಡ ಸೋನಕುಮೇರು, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಪಲಸದಕೋಡಿ, ಮಹಿಳಾ ಸಮಿತಿ ಸದಸ್ಯೆ ರಾಜೀವಿ , ಭಜನಾ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
error: Content is protected !!