May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ ಹಾಗೂ ಕೃಷಿಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾ.ಪಂ. ಅಧ್ಯಕ್ಷರು ವಿದ್ಯಾ ಶ್ರೀನಿವಾಸ ಗೌಡರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು.

ಬೆಳಾಲಿನ ಶಾಲಿನಿ ಮತ್ತು ತಂಡದವರು ನಾಡಗೀತೆ ಹಾಡುವ ಮೂಲಕ ಚಾಲನೆ ನೀಡಿದರು.ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮಂಜುಳಾಶ್ರೀ ಶೆಣೈ ಸ್ವಾಗತಿಸಿ, ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮೀನು ಮತ್ತು ಸಿಹಿ ನೀರಿನ ಮುತ್ತು ಕೃಷಿಯ ಬಗ್ಗೆ ತರಬೇತಿದಾರರಾದ ನವೀನ್ ಐವರ್ನಾಡು ವಿಡಿಯೋ ಪ್ರದರ್ಶನದ ಮೂಲಕ ವಿವರವಾದ ಮಾಹಿತಿ ನೀಡಿದರು. ಬೆಳ್ತಂಗಡಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಇಲಾಖೆಯ ಸೌಲಭ್ಯಗಳ ಬಗ್ಗೆ ಹಾಗೂ ಕೃಷಿಕರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ, ಬೆಳಾಲಿನ ಜನರಿಗೆ ಇಲಾಖೆಯೊಂದಿಗೆ ಇರುವ ನಿಕಟ ಸಂಪರ್ಕದ ಬಗ್ಗೆ ತಿಳಿಸಿದರು.

ಅತಿಥಿಗಳಾಗಿದ್ದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮಧುರ ಹಾಗೂ ಬೆಳಾಲು C. A. ಬ್ಯಾಂಕಿನ CEO ನಾರಾಯಣ ಗೌಡರು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆ ಹೇಳಿದರು.

ಕಾರ್ಯಾಗಾರದ ಮುಖ್ಯ ಸಂಯೋಜಕರಾಗಿದ್ದ ಬೆಳಾಲು C. A. ಬ್ಯಾಂಕಿನ ನಿರ್ದೇಶಕ ಸುಲೈಮಾನ್ ಬೆಳಾಲು ಕಾರ್ಯಕ್ರಮವನ್ನು ನಿರೂಪಿಸಿದರು.

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಕೃಷಿಕರು ಅಲ್ಲದೆ ಬೇರೆ ಬೇರೆ ಊರುಗಳಿಂದ ರೈತರು ಭಾಗವಹಿಸಿದ್ದರು. ಮಂಜುಳಶ್ರೀ ಧನ್ಯವಾದ ಸಲ್ಲಿಸಿದರು.

Related posts

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya
error: Content is protected !!