27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ ಹಾಗೂ ಕೃಷಿಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾ.ಪಂ. ಅಧ್ಯಕ್ಷರು ವಿದ್ಯಾ ಶ್ರೀನಿವಾಸ ಗೌಡರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು.

ಬೆಳಾಲಿನ ಶಾಲಿನಿ ಮತ್ತು ತಂಡದವರು ನಾಡಗೀತೆ ಹಾಡುವ ಮೂಲಕ ಚಾಲನೆ ನೀಡಿದರು.ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮಂಜುಳಾಶ್ರೀ ಶೆಣೈ ಸ್ವಾಗತಿಸಿ, ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮೀನು ಮತ್ತು ಸಿಹಿ ನೀರಿನ ಮುತ್ತು ಕೃಷಿಯ ಬಗ್ಗೆ ತರಬೇತಿದಾರರಾದ ನವೀನ್ ಐವರ್ನಾಡು ವಿಡಿಯೋ ಪ್ರದರ್ಶನದ ಮೂಲಕ ವಿವರವಾದ ಮಾಹಿತಿ ನೀಡಿದರು. ಬೆಳ್ತಂಗಡಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಇಲಾಖೆಯ ಸೌಲಭ್ಯಗಳ ಬಗ್ಗೆ ಹಾಗೂ ಕೃಷಿಕರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ, ಬೆಳಾಲಿನ ಜನರಿಗೆ ಇಲಾಖೆಯೊಂದಿಗೆ ಇರುವ ನಿಕಟ ಸಂಪರ್ಕದ ಬಗ್ಗೆ ತಿಳಿಸಿದರು.

ಅತಿಥಿಗಳಾಗಿದ್ದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮಧುರ ಹಾಗೂ ಬೆಳಾಲು C. A. ಬ್ಯಾಂಕಿನ CEO ನಾರಾಯಣ ಗೌಡರು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆ ಹೇಳಿದರು.

ಕಾರ್ಯಾಗಾರದ ಮುಖ್ಯ ಸಂಯೋಜಕರಾಗಿದ್ದ ಬೆಳಾಲು C. A. ಬ್ಯಾಂಕಿನ ನಿರ್ದೇಶಕ ಸುಲೈಮಾನ್ ಬೆಳಾಲು ಕಾರ್ಯಕ್ರಮವನ್ನು ನಿರೂಪಿಸಿದರು.

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಕೃಷಿಕರು ಅಲ್ಲದೆ ಬೇರೆ ಬೇರೆ ಊರುಗಳಿಂದ ರೈತರು ಭಾಗವಹಿಸಿದ್ದರು. ಮಂಜುಳಶ್ರೀ ಧನ್ಯವಾದ ಸಲ್ಲಿಸಿದರು.

Related posts

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!