May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ


ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸೇಕ್ರೆಡ್ ಹಾರ್ಟ್ ಕೋಂಗ್ರಿಗೆಷನ್ ಸಿಸ್ಟೆರ್ ಟೆಸಿ ಮಾನುವೆಲ್ ಇವರ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೆ 9 ರಂದು ಅನುದಾನಿತ ಶಾಲೆಗಳ ಕೇಂದ್ರ ಕಛೇರಿ ಶಿಕ್ಷಕರ ಸದನ ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರಧಾನ ಮಾಡಿದರು.


ಪ್ರಶಸ್ತಿ ಪುರಸ್ಕೃತ ಸಿಸ್ಟೆರ್ ಟೆಸಿ ಇವರನ್ನು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಅತಿ ವಂ. ಬಿಷಪ್ ಲಾರೆನ್ಸ್ ಮುಕ್ಕುಯಿ, ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ ಯ ಕಾರ್ಯದರ್ಶಿ ನೆಲ್ಯಾಡಿ ಅಲ್ಫೋನ್ಸ, ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು, ಸೇಕ್ರೆಡ್ ಹಾರ್ಟ್ ಕೊಂಗ್ರಿಗೇಷನ್ ಇದರ ರೀಜಿನಲ್ ಸುಪಿರಿಯರ್ ವಂ.ಸಿ. ಲಿಸ್ ಮಾತ್ಯು, ಮುಖ್ಯ ಕೌನ್ಸಿಲ್ ಸದಸ್ಯರಾದ ವಂ. ಸಿ| ತೆರೆಸ್ ಕುರಿಯನ್, ವಂ.ಸಿ| ಸೌಮ್ಯ, ವಂ. ಸಿ| ಎಲ್ಸಿಲಿಟ್ ವಾಯಕ್ಕಾಲ ಸಾಧನೆಗೆ ಅಭಿನಂದನೆಗಳು ಸಲ್ಲಿಸಿದ್ದಾರೆ

ಇವರು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಇಮ್ಮಾ ನುವೆಲ್ ಮತ್ತು ತ್ರೆಸಿಯಮ್ಮ ಇವರ ಸುಪುತ್ರಿ ಯಾಗಿದ್ದು ಕೊಡಗಿನ ಹೊಸ ಕೋಟೆ ದೀಪ್ತಿ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಸೇವೆ ಯಲ್ಲಿದ್ದಾರೆ.

Related posts

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya
error: Content is protected !!