24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಸುವರ್ಣ ಸಂಭ್ರಮ -2023 ಇದರ ವತಿಯಿಂದ
ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ ಇವರಿಗೆ ಅಭಿನಂದನೆ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಬೈಂದೂರನ ಉಪ್ಪುಂದಕ್ಕೆ ವಗಾ೯ವಣೆಗೊಂಡ ಗಣಪತಿ ಭಟ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಸೆ.9ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ್ ರಾವ್ ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ ಭಾಗವಹಿಸಿದ್ದರು.
ವೇದಿಕೆಯಲ್ಲಿ ಕಾಲೇಜಿನ ಹಳೇ ವಿದ್ಯಾರ್ಥಿ ಪ್ರಮೋದ್ ಆರ್ .ನಾಯಕ್, ನ.ಪಂ ಮಾಜಿ ಸದಸ್ಯ ಸಂತೋಷ್ ಕುಮಾರ್ ಜೈನ್, ಗಣಪತಿ ಭಟ್ ರವರ ಪತ್ನಿ ನಾಗರತ್ನ ಉಪಸ್ಥಿತರಿದ್ದರು. ಉಪನ್ಯಾಸಕ ಶೀನಾ ನಾಡೋಳಿ ಸ್ವಾಗತಿಸಿದರು. ಉಪನ್ಯಾಸಕಿ ಹೇಮಾವತಿ ಕಾಯ೯ಕ್ರಮ ನಿರೂಪಿಸಿದರು.

ಹಿರಿಯ ಉಪನ್ಯಾಸಕ ಆನಂದ ಡಿ. ಅಭಿನಂದನಾ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ರಂಜಿತಾ,ಪ್ರಜ್ಞಾ, ಉಪನ್ಯಾಸಕ ತಾರಾನಾಥ್ ಗಣಪತಿ ಭಟ್ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಸುವರ್ಣ ಕುಮಾರಿ ಮತ್ತು ಮಂಗಳ ಇವರು ಸನ್ಮಾನ ಪತ್ರ ವಾಚಿಸಿದರು.‌ ಉಪನ್ಯಾಸಕ ಮೋಹನ್ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು.
ಸುವರ್ಣ ಮಹೋತ್ಸವ ಸಮಿತಿ ಪದಾಧಿಕಾರಿಗಳು , ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು.

Related posts

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya
error: Content is protected !!