May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ ಹಾಗೂ ಕೃಷಿಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾ.ಪಂ. ಅಧ್ಯಕ್ಷರು ವಿದ್ಯಾ ಶ್ರೀನಿವಾಸ ಗೌಡರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು.

ಬೆಳಾಲಿನ ಶಾಲಿನಿ ಮತ್ತು ತಂಡದವರು ನಾಡಗೀತೆ ಹಾಡುವ ಮೂಲಕ ಚಾಲನೆ ನೀಡಿದರು.ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮಂಜುಳಾಶ್ರೀ ಶೆಣೈ ಸ್ವಾಗತಿಸಿ, ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮೀನು ಮತ್ತು ಸಿಹಿ ನೀರಿನ ಮುತ್ತು ಕೃಷಿಯ ಬಗ್ಗೆ ತರಬೇತಿದಾರರಾದ ನವೀನ್ ಐವರ್ನಾಡು ವಿಡಿಯೋ ಪ್ರದರ್ಶನದ ಮೂಲಕ ವಿವರವಾದ ಮಾಹಿತಿ ನೀಡಿದರು. ಬೆಳ್ತಂಗಡಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಇಲಾಖೆಯ ಸೌಲಭ್ಯಗಳ ಬಗ್ಗೆ ಹಾಗೂ ಕೃಷಿಕರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ, ಬೆಳಾಲಿನ ಜನರಿಗೆ ಇಲಾಖೆಯೊಂದಿಗೆ ಇರುವ ನಿಕಟ ಸಂಪರ್ಕದ ಬಗ್ಗೆ ತಿಳಿಸಿದರು.

ಅತಿಥಿಗಳಾಗಿದ್ದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮಧುರ ಹಾಗೂ ಬೆಳಾಲು C. A. ಬ್ಯಾಂಕಿನ CEO ನಾರಾಯಣ ಗೌಡರು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆ ಹೇಳಿದರು.

ಕಾರ್ಯಾಗಾರದ ಮುಖ್ಯ ಸಂಯೋಜಕರಾಗಿದ್ದ ಬೆಳಾಲು C. A. ಬ್ಯಾಂಕಿನ ನಿರ್ದೇಶಕ ಸುಲೈಮಾನ್ ಬೆಳಾಲು ಕಾರ್ಯಕ್ರಮವನ್ನು ನಿರೂಪಿಸಿದರು.

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಕೃಷಿಕರು ಅಲ್ಲದೆ ಬೇರೆ ಬೇರೆ ಊರುಗಳಿಂದ ರೈತರು ಭಾಗವಹಿಸಿದ್ದರು. ಮಂಜುಳಶ್ರೀ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!