32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ ಹಾಗೂ ಕೃಷಿಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾ.ಪಂ. ಅಧ್ಯಕ್ಷರು ವಿದ್ಯಾ ಶ್ರೀನಿವಾಸ ಗೌಡರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು.

ಬೆಳಾಲಿನ ಶಾಲಿನಿ ಮತ್ತು ತಂಡದವರು ನಾಡಗೀತೆ ಹಾಡುವ ಮೂಲಕ ಚಾಲನೆ ನೀಡಿದರು.ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮಂಜುಳಾಶ್ರೀ ಶೆಣೈ ಸ್ವಾಗತಿಸಿ, ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮೀನು ಮತ್ತು ಸಿಹಿ ನೀರಿನ ಮುತ್ತು ಕೃಷಿಯ ಬಗ್ಗೆ ತರಬೇತಿದಾರರಾದ ನವೀನ್ ಐವರ್ನಾಡು ವಿಡಿಯೋ ಪ್ರದರ್ಶನದ ಮೂಲಕ ವಿವರವಾದ ಮಾಹಿತಿ ನೀಡಿದರು. ಬೆಳ್ತಂಗಡಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಇಲಾಖೆಯ ಸೌಲಭ್ಯಗಳ ಬಗ್ಗೆ ಹಾಗೂ ಕೃಷಿಕರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ, ಬೆಳಾಲಿನ ಜನರಿಗೆ ಇಲಾಖೆಯೊಂದಿಗೆ ಇರುವ ನಿಕಟ ಸಂಪರ್ಕದ ಬಗ್ಗೆ ತಿಳಿಸಿದರು.

ಅತಿಥಿಗಳಾಗಿದ್ದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮಧುರ ಹಾಗೂ ಬೆಳಾಲು C. A. ಬ್ಯಾಂಕಿನ CEO ನಾರಾಯಣ ಗೌಡರು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆ ಹೇಳಿದರು.

ಕಾರ್ಯಾಗಾರದ ಮುಖ್ಯ ಸಂಯೋಜಕರಾಗಿದ್ದ ಬೆಳಾಲು C. A. ಬ್ಯಾಂಕಿನ ನಿರ್ದೇಶಕ ಸುಲೈಮಾನ್ ಬೆಳಾಲು ಕಾರ್ಯಕ್ರಮವನ್ನು ನಿರೂಪಿಸಿದರು.

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಕೃಷಿಕರು ಅಲ್ಲದೆ ಬೇರೆ ಬೇರೆ ಊರುಗಳಿಂದ ರೈತರು ಭಾಗವಹಿಸಿದ್ದರು. ಮಂಜುಳಶ್ರೀ ಧನ್ಯವಾದ ಸಲ್ಲಿಸಿದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!