23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

ಧರ್ಮಸ್ಥಳದ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಈಗಾಗಲೇ ಹಲವಾರು ಸಂಘಟನೆಗಳು ಸಾಥ್ ನೀಡಿದ್ದು, ಸೌಜನ್ಯ ಹೋರಾಟ ಸಮಿತಿ ಹಾಗೂ ಜಿಲ್ಲೆಯ ಒಕ್ಕಲಿಗ ಗೌಡ ಸಂಘದ ಪದಾಧಿಕಾರಿಗಳು ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮ ಸಮಿತಿಗಳ ಪದಾಧಿಕಾರಿಗಳ ಸಹಿತ ಸೌಜನ್ಯ ಕುಟುಂಬ ಸೇರಿ ಸುಮಾರು 150 ಕ್ಕೂ ಹೆಚ್ಚು ಮಂದಿ ಒಕ್ಕಲಿಗ ಮುಖಂಡರು ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿದ್ದು, ಸುದೀರ್ಘ ಕಾಲ ಮಾತುಕತೆ ನಡೆಸಲಾಯಿತು.

ಇಂತಹದೊಂದು ಹೇಯ, ಬರ್ಬರ ಕೃತ್ಯ ನಡೆದಿರುವುದು ಬೇಸರದ ವಿಚಾರವಾಗಿದೆ. ಇದು ಒಕ್ಕಲಿಗ ಸಮುದಾಯದ ಹುಡುಗಿಯ ಪ್ರಶ್ನೆ ಮಾತ್ರವಲ್ಲ. ಸಮಗ್ರ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಸತ್ಯದ ಪರ ಮತ್ತು ನ್ಯಾಯದ ಪರ ಆದಿಚುಂಚನಗಿರಿ ಮಠ ಯಾವತ್ತೂ ನಿಲ್ಲುತ್ತದೆ ಎಂದು ಸ್ವಾಮೀಜಿ ಭರವಸೆ ನೀಡಿದರು..

ಸೌಜನ್ಯ ನ್ಯಾಯಕ್ಕಾಗಿ ಕಾನೂನು ತಜ್ಞರ ಸಲಹೆಯೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಘಟನೆಯ ಗಂಭೀರತೆ ಮನವರಿಕೆ ಮಾಡುವ ಹಾಗೂ ಆಕೆಯ ಸಾವಿನ ನ್ಯಾಯಕ್ಕಾಗಿ ಕಾನೂನಿನ ಮೂಲಕ ಆಗಬೇಕಾದ ಸೂಕ್ತ ವ್ಯವಸ್ಥೆಗಳನ್ನು ಪೂರೈಸುವ ಬಗ್ಗೆ ಶ್ರೀಗಳು ಭರವಸೆ ನೀಡಿದ್ದಾರೆ.

ಅಲ್ಲದೇ ಈಗಾಗಲೇ ನಡೆಯುತ್ತಿರುವ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಗಳು ಆಕೆ ಒಕ್ಕಲಿಗ ಸಮಾಜದ ಹುಡುಗಿ ಎನ್ನುವ ಯೋಚನೆ ಪಕ್ಕಕ್ಕಿಟ್ಟು ನಾವು ಯೋಚಿಸಬೇಕು. ಎಲ್ಲಾ ಸಮಾನ ಮನಸ್ಕರು ಸೇರಿ ನಡೆಸಿರುವ ಹೋರಾಟ ನಿಜಕ್ಕೂ ಶ್ಲಾಘನೀಯ. ಸಮಗ್ರ ಮರು ತನಿಖೆಗೆ ಒತ್ತಾಯ ಮಾಡುತ್ತಿರುವ ನಿಮ್ಮೆಲ್ಲ ಹೋರಾಟ ಫಲ ನೀಡಲಿದೆ. ಆಕೆಯ ನ್ಯಾಯಕ್ಕಾಗಿ ಬೇಕಾದ ಕಾನೂನು ಹೋರಾಟಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಶ್ರೀಗಳು ಭರವಸೆ ನೀಡಿದ್ದಾರೆ .

ಈ ಸಂದರ್ಭದಲ್ಲಿಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಸವಣಾಲು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಡಿರುದ್ಯಾವರ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಯುವರಾಜ್ ಅನಾರು, ಪ್ರಸನ್ನ ಗೌಡ ಬಾರ್ಯ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಕೌಡಂಗೆ, ಗಣೇಶ್ ಕಲಾಯಿ, ಸಚಿನ್ ಕನ್ಯಾಡಿ, ರಾಘವ ಸವಣಾಲು, ನಾಗೇಶ್ ಗೌಡ ಸ್ವಾಮಿ ಪ್ರಸಾದ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya
error: Content is protected !!