23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!