April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.

ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಮಂಗಳೂರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್ ಉಪಸ್ಥಿತರಿದ್ದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು, ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ