July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.

ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಮಂಗಳೂರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್ ಉಪಸ್ಥಿತರಿದ್ದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು, ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!