September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.

ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಮಂಗಳೂರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್ ಉಪಸ್ಥಿತರಿದ್ದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು, ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.

Related posts

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!