July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾಯ ಮಹದೇವ ದೇವಸ್ಥಾನ ,ಬೆಳಾಲು ಇಲ್ಲಿನ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾಗಿ ಲಯನ್ ಉಮೇಶ್ ಶೆಟ್ಟಿ ವಹಿಸಿದರು. ಶ್ರೀಮತಿ ವಿದ್ಯಾ ಶ್ರೀನಿವಾಸ್ ಶಿಬಿರವನ್ನು ಉದ್ಘಾಟಿಸಿ ಯೋಗಾಸನದ ಮಹತ್ವದ ಬಗ್ಗೆ ತಿಳಿಸಿದರು..

ಮುಖ್ಯ ಅತಿಥಿಗಳಾಗಿ ವಿಠಲ ಮಡಿವಾಳ ಹಾಗೂ ಕೃಷ್ಣಪ್ಪಗೌಡ, ಲಯನ್ಸ್ ಕ್ಲಬ್ ನ ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರಧ್ಧಾ , ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ| ದೇವಿ ಪ್ರಸಾದ್ ಬೊಲ್ಮ , ಯೋಗ ತರಬೇತುದಾರರಾದ ಕು. ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು. ಭಾಷಿಣಿ ಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿದರು.

ನಿಕಟ ಪೂರ್ವ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಬೊಲ್ಮ ಧನ್ಯವಾದವಿತ್ತರು. ಕಾರ್ಯದರ್ಶಿ ಲಯನ್ ಅನಂತಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya
error: Content is protected !!