September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷ ರತ್ನಾಕರ ಬುಣ್ಣನ್ ಇವರು ವಹಿಸಿದ್ದರು. ಹಿರಿಯರಾದ ಜಯರಾಜ್ ಕಾಬಯ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಪ್ರಾಂಶುಪಾಲರು ನಡ ಕಾಲೇಜು ಬೆಳ್ತಂಗಡಿ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಯಾದ ದಯಾನಂದ ಪೂಜಾರಿ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ನಿವೃತ್ತ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಶೆಟ್ಟಿ, ಮರೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವನಿಂಗಪ್ಪ ಗಾನಿಗ , ಹಿರಿಯರಾದ ಭರತ್ ಕುಮಾರ್ ಜೈನ್, ಮಾಜಿ ಪಂಚಾಯತ್ ಅಧ್ಯಕ್ಷರಾದ ಪದ್ಮಶ್ರೀ ಜೈನ್, ವಲಯದ ಮೇಲ್ವಿಚಾರಕರಾದ ದಮಯಂತಿ , ಒಕ್ಕೂಟದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು , ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರೂಪಣೆ ಮೇಲ್ವಿಚಾರಕರಾದ ದಮಯಂತಿ ನೆರವೇರಿಸಿದರು. ಒಕ್ಕೂಟದ ಅಧ್ಯಕ್ಷ ಶುಭರಾಜ್ ಹೆಗ್ಡೆ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಹರಿಣಾಕ್ಷಿ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ಆಟೋಟ ಸ್ಪರ್ಧೆಗಳು ನಡೆದವು. ನಂತರ ಸಂಜೆಯ ಸಭಾ ಕಾರ್ಯಕ್ರಮ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು.

Related posts

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!