26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!