25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

ಉಜಿರೆ: ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆಸಿದ 2022-23ರ ಸಾಲಿನ ಬಿ.ಎನ್.ವೈ.ಎಸ್. ಪದವಿಯ ಮೂರು ಮತ್ತು ನಾಲ್ಕನೇ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ 100% ಫಲಿತಾಂಶವನ್ನು ಪಡೆದು ಪ್ರಕೃತಿ ಚಿಕಿತ್ಸೆ ಮತ್ತು ಯೋಗದಲ್ಲಿ ದೇಶದ ಬೆಸ್ಟ್ ಕಾಲೇಜು ಎಂದು ಸಾಬೀತುಪಡಿಸಿದ್ದಾರೆ.

ಮೂರನೆಯ ವರ್ಷದಲ್ಲಿ 39 ಹಾಗೂ ನಾಲ್ಕನೇ ವರ್ಷದಲ್ಲಿ37 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ನಾಲ್ಕನೇ ವರ್ಷದ ವಿದ್ಯಾರ್ಥಿನಿ ಕು.ಗಣ್ಯಶ್ರೀ ಆಚಾರ್ಯ ಶೇಕಡ 87 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ, ವಿಶ್ವವಿದ್ಯಾನಿಲಯ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ಕೊಡುವ ಚಿನ್ನದ ಪದಕಕ್ಕೆ ಭಾಜನರಾಗಿರುತ್ತಾರೆ ಮತ್ತು ಕು.ರಾಜೇಶ್ವರಿ ಶೇಕಡ 84.5 ಅಂಕಗಳಿಂದ ದ್ವಿತೀಯ ಸ್ಥಾನವನ್ನು ಹೊಂದಿದ್ದಾರೆ. ಮೂರನೇ ವರ್ಷದಲ್ಲಿ ಕು.ಪ್ರತೀಕ್ಷಾ ಶೇಕಡಾ 83 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನವನ್ನು ಗಳಿಸಿದರೆ, ಕು.ಐಶ್ವರ್ಯ 81.2 ಶೇಕಡ ಅಂಕಗಳಿಂದ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಗೌರವಾನ್ವಿತ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಹಾಗೂ ಡಾ.ಸತೀಶ್ ಚಂದ್ರ ರವರು ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!