24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya
error: Content is protected !!