September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!