July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!