September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya
error: Content is protected !!