22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.

ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಮಂಗಳೂರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್ ಉಪಸ್ಥಿತರಿದ್ದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು, ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.

Related posts

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya
error: Content is protected !!