23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾಯ ಮಹದೇವ ದೇವಸ್ಥಾನ ,ಬೆಳಾಲು ಇಲ್ಲಿನ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾಗಿ ಲಯನ್ ಉಮೇಶ್ ಶೆಟ್ಟಿ ವಹಿಸಿದರು. ಶ್ರೀಮತಿ ವಿದ್ಯಾ ಶ್ರೀನಿವಾಸ್ ಶಿಬಿರವನ್ನು ಉದ್ಘಾಟಿಸಿ ಯೋಗಾಸನದ ಮಹತ್ವದ ಬಗ್ಗೆ ತಿಳಿಸಿದರು..

ಮುಖ್ಯ ಅತಿಥಿಗಳಾಗಿ ವಿಠಲ ಮಡಿವಾಳ ಹಾಗೂ ಕೃಷ್ಣಪ್ಪಗೌಡ, ಲಯನ್ಸ್ ಕ್ಲಬ್ ನ ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರಧ್ಧಾ , ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ| ದೇವಿ ಪ್ರಸಾದ್ ಬೊಲ್ಮ , ಯೋಗ ತರಬೇತುದಾರರಾದ ಕು. ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು. ಭಾಷಿಣಿ ಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿದರು.

ನಿಕಟ ಪೂರ್ವ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಬೊಲ್ಮ ಧನ್ಯವಾದವಿತ್ತರು. ಕಾರ್ಯದರ್ಶಿ ಲಯನ್ ಅನಂತಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!