September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿಯ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲೆಯ ನಿಕಟ ಪೂರ್ವ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ  ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಸುರೇಶ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಸಮಿತಿ ಸರ್ವಸದಸ್ಯರು  ಮತ್ತು ಶಾಲಾ ಪೋಷಕರ ವತಿಯಿಂದ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ  ಅಧ್ಯಕ್ಷ ನೀನಾಕುಮಾರ್  ವಹಿಸಿದ್ದರು. ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ನಿವೃತ್ತ ಸಮನ್ವಯಾ ಧಿಕಾರಿ ಗಣೇಶ್ ಐತಾಳ್  ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಿಯಾಜ್ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ  ಕಿರಣ್ ಕುಮಾರ್ ಶೆಟ್ಟಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯ ಉಪಸ್ಥಿತರಿದ್ದರು.  

ಶಾಲಾ ಶಿಕ್ಷಕಿ  ಶ್ರೀಮತಿ ವಿದ್ಯಾ ಶೆಣೈ , ಮಾಜಿ ಎಸ್.ಡಿ.ಎಂಸಿ ಅಧ್ಯಕ್ಷ ಜಿನೇಂದ್ರ ಜೈನ್, ವಿದ್ಯಾರ್ಥಿಗಳಾದ ಚೇತನ್ ಮತ್ತು ಸಂಜನಾ ಬೀಳ್ಕೊಡುತ್ತಿರುವ ಶಿಕ್ಷಕರ ಬಗ್ಗೆ ತಮ್ಮ ಅನಿಸಿಕೆಗಳನ್ನು  ಹಂಚಿಕೊಂಡರು. ಅತಿಥಿಗಳೀರ್ವರು  ಸುರೇಶ್ ರವರ ಬಗ್ಗೆ ಮೆಚ್ಚುಗೆಯ ಮಾತನಾಡಿ ಸರ್ಕಾರಿ ಶಾಲೆಯ ಬಗ್ಗೆ ಧನಾತ್ಮಕ ಅಂಶಗಳನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಸವಿತಾ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿದಾಯ ಗೀತೆಗಳನ್ನು ಹಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕರು ಸ್ವಾಗತಿಸಿ,  ಹಿರಿಯ ಶಿಕ್ಷಕ ದಿನಕರ್ ನಾಯಕ್ ವಂದನಾರ್ಪಣೆಗೈದು  ಶಿವರಾಂ ಕಾರ್ಯಕ್ರಮ  ನಿರ್ವಹಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!