22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿಯ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲೆಯ ನಿಕಟ ಪೂರ್ವ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ  ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಸುರೇಶ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಸಮಿತಿ ಸರ್ವಸದಸ್ಯರು  ಮತ್ತು ಶಾಲಾ ಪೋಷಕರ ವತಿಯಿಂದ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ  ಅಧ್ಯಕ್ಷ ನೀನಾಕುಮಾರ್  ವಹಿಸಿದ್ದರು. ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ನಿವೃತ್ತ ಸಮನ್ವಯಾ ಧಿಕಾರಿ ಗಣೇಶ್ ಐತಾಳ್  ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಿಯಾಜ್ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ  ಕಿರಣ್ ಕುಮಾರ್ ಶೆಟ್ಟಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯ ಉಪಸ್ಥಿತರಿದ್ದರು.  

ಶಾಲಾ ಶಿಕ್ಷಕಿ  ಶ್ರೀಮತಿ ವಿದ್ಯಾ ಶೆಣೈ , ಮಾಜಿ ಎಸ್.ಡಿ.ಎಂಸಿ ಅಧ್ಯಕ್ಷ ಜಿನೇಂದ್ರ ಜೈನ್, ವಿದ್ಯಾರ್ಥಿಗಳಾದ ಚೇತನ್ ಮತ್ತು ಸಂಜನಾ ಬೀಳ್ಕೊಡುತ್ತಿರುವ ಶಿಕ್ಷಕರ ಬಗ್ಗೆ ತಮ್ಮ ಅನಿಸಿಕೆಗಳನ್ನು  ಹಂಚಿಕೊಂಡರು. ಅತಿಥಿಗಳೀರ್ವರು  ಸುರೇಶ್ ರವರ ಬಗ್ಗೆ ಮೆಚ್ಚುಗೆಯ ಮಾತನಾಡಿ ಸರ್ಕಾರಿ ಶಾಲೆಯ ಬಗ್ಗೆ ಧನಾತ್ಮಕ ಅಂಶಗಳನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಸವಿತಾ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿದಾಯ ಗೀತೆಗಳನ್ನು ಹಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕರು ಸ್ವಾಗತಿಸಿ,  ಹಿರಿಯ ಶಿಕ್ಷಕ ದಿನಕರ್ ನಾಯಕ್ ವಂದನಾರ್ಪಣೆಗೈದು  ಶಿವರಾಂ ಕಾರ್ಯಕ್ರಮ  ನಿರ್ವಹಿಸಿದರು.

Related posts

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!