September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

ವೇಣೂರು:2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು ಇದರ ಸಮಾಲೋಚನೆ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳೊಂದಿಗೆ ಸೆ. 11 ರಂದು ಶ್ರೀ ಬಾಹುಬಲಿ ಸಭಾ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಮೂಡಬಿದ್ರೆ ಶ್ರೀ ಜೈನ ಮಠದ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ,ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಮಾಜಿ ಸಚಿವ ಅಭಯಚಂದ್ರ ಜೈನ್,ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಸಹಾಯಕ ಕಮೀಷನರ್ ಗೀರೀಶ್ ನಂದನ್, ಪೋಲೀಸ್ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸಮಾಲೋಚನೆ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.ರಸ್ತೆ ಡಾಮರೀಕರಣ,ಹೈಮಾಸ್ಕ್ ದೀಪ ವಿಸ್ತರಣೆ,ನೀರಿನ ವ್ಯವಸ್ಥೆ, ತ್ಯಾಗಿಭವನ, ಭೋಜನ ಶಾಲೆ,ಸಮುದಾಯ ನಿರ್ಮಾಣ,ಸಂಪರ್ಕ ರಸ್ತೆ ಅಗಲೀಕರಣ, ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ವಿವಿಧ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆಗಳು ನಡೆಯಿತು.

ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.ಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!