24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

ವೇಣೂರು:2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು ಇದರ ಸಮಾಲೋಚನೆ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳೊಂದಿಗೆ ಸೆ. 11 ರಂದು ಶ್ರೀ ಬಾಹುಬಲಿ ಸಭಾ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಮೂಡಬಿದ್ರೆ ಶ್ರೀ ಜೈನ ಮಠದ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ,ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಮಾಜಿ ಸಚಿವ ಅಭಯಚಂದ್ರ ಜೈನ್,ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಸಹಾಯಕ ಕಮೀಷನರ್ ಗೀರೀಶ್ ನಂದನ್, ಪೋಲೀಸ್ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸಮಾಲೋಚನೆ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.ರಸ್ತೆ ಡಾಮರೀಕರಣ,ಹೈಮಾಸ್ಕ್ ದೀಪ ವಿಸ್ತರಣೆ,ನೀರಿನ ವ್ಯವಸ್ಥೆ, ತ್ಯಾಗಿಭವನ, ಭೋಜನ ಶಾಲೆ,ಸಮುದಾಯ ನಿರ್ಮಾಣ,ಸಂಪರ್ಕ ರಸ್ತೆ ಅಗಲೀಕರಣ, ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ವಿವಿಧ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆಗಳು ನಡೆಯಿತು.

ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.ಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya
error: Content is protected !!