22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.


ಬಳಿಕ ನಮನ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಸರಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಬೇಕು, ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಸೌಲಭ್ಯವಿದ್ದು, ಸ್ವಾತಂತ್ರ್ಯ ಬಂದ ಬಳಿಕ ಇದುವರೆಗೆ ಆಗದ ಬಸ್ಸಿನ ವ್ಯವಸ್ಥೆ ಈ ಪ್ರದೇಶಕ್ಕೆ ಸರಕಾರ ಮಾಡಿದೆ ಎಂದು ತಿಳಿಸಿದರು.


ಮಾಜಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್, ಮನಪಾ ಸದಸ್ಯ ಎ.ಸಿ.ವಿನಯ್ ರಾಜ್, ಜಿ.ಪಂ. ಮಾಜಿ ಸದಸ್ಯರಾದ ಸಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಗ್ರಾಮೀಣ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಪ್ರಮುಖರಾದ ಪ್ರಶಾಂತ್ ವೇಗಸ್, ಸಂಜೀವ ಪೂಜಾರಿ, ವೀರೇಂದ್ರ ಜೈನ್, ಈಶ್ವರ ಭಟ್ ಎಂ. ಸೆಬಾಸ್ಟಿನ್ ಕಳೆಂಜ, ಯೋಗೀಶ್ ಅಳಕೆ, ರವಿಕೋಟ್ಯಾನ್, ಸಲೀಂ ಜಿ.ಕೆರೆ, ಅಭಿನಂದನ್ ಹರೀಶ್ ಕುಮಾರ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ವಿಭಾಗೀಯ ಸಂಚಾರ ಅಧಿಕಾರಿ ಕೆ.ಮುರಳೀಧರ್ ಆಚಾರ್ಯ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ದೇವಿಪ್ರಸಾದ್ ಶೆಟ್ಟಿ ಅಳದಂಗಡಿ ಸ್ವಾಗತಿಸಿದರು. ತಾ.ಪಂ. ಸಂಯೋಜಕ ಜಯಾನಂದ್ ನಿರೂಪಿಸಿದರು. ಸುಭಾಶ್ಚಂದ್ರ ರೈ ಅಳದಂಗಡಿ ವಂದಿಸಿದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya
error: Content is protected !!