23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.


ಬಳಿಕ ನಮನ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಸರಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಬೇಕು, ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಸೌಲಭ್ಯವಿದ್ದು, ಸ್ವಾತಂತ್ರ್ಯ ಬಂದ ಬಳಿಕ ಇದುವರೆಗೆ ಆಗದ ಬಸ್ಸಿನ ವ್ಯವಸ್ಥೆ ಈ ಪ್ರದೇಶಕ್ಕೆ ಸರಕಾರ ಮಾಡಿದೆ ಎಂದು ತಿಳಿಸಿದರು.


ಮಾಜಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್, ಮನಪಾ ಸದಸ್ಯ ಎ.ಸಿ.ವಿನಯ್ ರಾಜ್, ಜಿ.ಪಂ. ಮಾಜಿ ಸದಸ್ಯರಾದ ಸಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಗ್ರಾಮೀಣ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಪ್ರಮುಖರಾದ ಪ್ರಶಾಂತ್ ವೇಗಸ್, ಸಂಜೀವ ಪೂಜಾರಿ, ವೀರೇಂದ್ರ ಜೈನ್, ಈಶ್ವರ ಭಟ್ ಎಂ. ಸೆಬಾಸ್ಟಿನ್ ಕಳೆಂಜ, ಯೋಗೀಶ್ ಅಳಕೆ, ರವಿಕೋಟ್ಯಾನ್, ಸಲೀಂ ಜಿ.ಕೆರೆ, ಅಭಿನಂದನ್ ಹರೀಶ್ ಕುಮಾರ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ವಿಭಾಗೀಯ ಸಂಚಾರ ಅಧಿಕಾರಿ ಕೆ.ಮುರಳೀಧರ್ ಆಚಾರ್ಯ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ದೇವಿಪ್ರಸಾದ್ ಶೆಟ್ಟಿ ಅಳದಂಗಡಿ ಸ್ವಾಗತಿಸಿದರು. ತಾ.ಪಂ. ಸಂಯೋಜಕ ಜಯಾನಂದ್ ನಿರೂಪಿಸಿದರು. ಸುಭಾಶ್ಚಂದ್ರ ರೈ ಅಳದಂಗಡಿ ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!