23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.


ಬಳಿಕ ನಮನ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಸರಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಬೇಕು, ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಸೌಲಭ್ಯವಿದ್ದು, ಸ್ವಾತಂತ್ರ್ಯ ಬಂದ ಬಳಿಕ ಇದುವರೆಗೆ ಆಗದ ಬಸ್ಸಿನ ವ್ಯವಸ್ಥೆ ಈ ಪ್ರದೇಶಕ್ಕೆ ಸರಕಾರ ಮಾಡಿದೆ ಎಂದು ತಿಳಿಸಿದರು.


ಮಾಜಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್, ಮನಪಾ ಸದಸ್ಯ ಎ.ಸಿ.ವಿನಯ್ ರಾಜ್, ಜಿ.ಪಂ. ಮಾಜಿ ಸದಸ್ಯರಾದ ಸಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಗ್ರಾಮೀಣ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಪ್ರಮುಖರಾದ ಪ್ರಶಾಂತ್ ವೇಗಸ್, ಸಂಜೀವ ಪೂಜಾರಿ, ವೀರೇಂದ್ರ ಜೈನ್, ಈಶ್ವರ ಭಟ್ ಎಂ. ಸೆಬಾಸ್ಟಿನ್ ಕಳೆಂಜ, ಯೋಗೀಶ್ ಅಳಕೆ, ರವಿಕೋಟ್ಯಾನ್, ಸಲೀಂ ಜಿ.ಕೆರೆ, ಅಭಿನಂದನ್ ಹರೀಶ್ ಕುಮಾರ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ವಿಭಾಗೀಯ ಸಂಚಾರ ಅಧಿಕಾರಿ ಕೆ.ಮುರಳೀಧರ್ ಆಚಾರ್ಯ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ದೇವಿಪ್ರಸಾದ್ ಶೆಟ್ಟಿ ಅಳದಂಗಡಿ ಸ್ವಾಗತಿಸಿದರು. ತಾ.ಪಂ. ಸಂಯೋಜಕ ಜಯಾನಂದ್ ನಿರೂಪಿಸಿದರು. ಸುಭಾಶ್ಚಂದ್ರ ರೈ ಅಳದಂಗಡಿ ವಂದಿಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!