25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya
error: Content is protected !!