22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya
error: Content is protected !!