25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya
error: Content is protected !!