23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಓಡಿಲ್ನಾಳ ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆ ಹಾಗೂ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಸ್ಯ ಶ್ಯಾಮಲ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಸೆ.11 ರಂದು ನಡೆಸಲಾಯಿತು.

ಡಿ ಡಿ ಪಿ ಐ ದಯಾನಂದ ರಾಮಚಂದ್ರ ನಾಯ್ಕ್ ಇವರ ಮುಂದಾಳತ್ವದಲ್ಲಿ, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಆರ್ ಎಫ್ ಕುಮಾರಿ ವಿದ್ಯಾ , ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ , ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ಕುವೆಟ್ಟು ಗ್ರಾ ಪಂ ಸದಸ್ಯರಾದ ಲಕ್ಷ್ಮಿಕಾಂತ್ ಶೆಟ್ಟಿ ಮೂಡೈಲು. ಆನಂದಿ ಮದ್ದಡ್ಕ, ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ, ಗುರುವಾಯನಕೆರೆ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಉಪಾಧ್ಯಕ್ಷೆ ಶಮೀಮ, ಸದಸ್ಯರಾದ ಶೀಲಾ , ಪ್ರಮೀಳಾ, ಜಾಸ್ಮಿನ್, ಚಿತ್ರ , ದೂಜ ಕೆ, ಸುರೇಶ್ ಆಚಾರಿ, ರಫೀಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ ಡಿಸೋಜ ನಾನಾಡಿ, ಶಾಲಾ ಮುಖ್ಯೋಪಾಧ್ಯಾಯನಿ ಉಷಾ ಪಿ, ಶಾಲಾ ಅಭಿಮಾನಿಗಳಾದ ನಾರಾಯಣ ಭಟ್ ನಡುಮನೆ, ಪೂವಪ್ಪ ಭಂಡಾರಿ ಪಣೆಜಾಲು, ಪೋಷಕ ವೃಂದ, ಸಹ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು , ಅಡುಗೆ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya
error: Content is protected !!