25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya
error: Content is protected !!