23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ ಹೇಳಿದರು.
ಅವರು ಸೆ.12 ರಂದು ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಒಕ್ಕೂಟದ ಮಿನಿ ಡೈರಿ, ನಂದಿನಿ ಸಮೃದ್ಧಿ, ಹೆಣ್ಣುಕರು ಸಾಕಾಣೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.


ವರದಿ ಸಾಲಿನಲ್ಲಿ ರೂ. 79,63,897 ಮೊತ್ತದ ಹಾಲನ್ನು ಸಂಗ್ರಹಿಸಲಾಗಿದ್ದು ರೂ.83,39,248 ಮೊತ್ತದಲ್ಲಿ ಒಕ್ಕೂಟಕ್ಕೆ ಹಾಗೂ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ. ರೂ.1,45,326 ರಷ್ಟು ಲಾಭ ಬಂದಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಿರಂಜನ ಜೋಶಿ ಅವರು ಹಾಲು ಸಂಗ್ರಹ ಹೆಚ್ಚಾಗುವಂತೆ ಎಲ್ಲರೂ ಶ್ರಮಿಸುವಂತೆ ವಿನಂತಿಸಿದರು.
ಹೆಚ್ಚು ಹಾಲು ಪೂರೈಸುತ್ತಿರುವ ಬೇಬಿ ಪೂಜಾರಿ, ರವಿ ಪೂಜಾರಿ, ಹರೀಶ್ ಮಡಿವಾಳ ಅವರಿಗೆ ಬಹುಮಾನ ನೀಡಲಾಯಿತು. ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು.


ಸಂಘದ ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿ ಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಹಾಲು ಪರೀಕ್ಷಕಿ ಸುಜಾತಾ ಇದ್ದರು.
ಕಾರ್ಯನಿರ್ವಹಣಾಧಿಕಾರಿ ಚೈತ್ರಾ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷೆ ವನಿತಾ ವಂದಿಸಿದರು.

Related posts

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya
error: Content is protected !!