July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

ಉಜಿರೆ: ಪ್ರಕೃತಿಯೊಂದಿಗಿನ ಮನುಜರ ಬಾಂಧವ್ಯದ ಸಂಕೇತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಮರಕ್ಕೆ ರಾಖಿ ಕಟ್ಟುವುದು ಉತ್ತಮ ಕಾರ್ಯ. ಪರಿಸರವನ್ನು ಉಳಿಸುವ ಮತ್ತು ಪೋಷಿಸುವ ಕಾರ್ಯ ನಮ್ಮದಾಗಿದೆ. ಮಾನವರು ಮತ್ತು ನೈಸರ್ಗಿಕ ಪ್ರಪಂಚದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳ ತಿಳುವಳಿಕೆಯನ್ನು ಈ ವೃಕ್ಷಾಬಂಧನ ಕಟ್ಟುವ ಕಾರ್ಯ ಸುಂದರವಾಗಿ ಪ್ರತಿಬಿಂಬಿಸಿದೆ” ಎಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ವಿಜ್ಞಾನ ಶಿಕ್ಷಕಿ ರೂಪಶ್ರೀ ಹೇಳಿದರು.

ಅವರು ಸೆ.11 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ‘ವೃಕ್ಷಾಬಂಧನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಾವೇ ತಯಾರು ಮಾಡಿದ ಪರಿಸರಸ್ನೇಹಿ ರಾಖಿಯನ್ನು ಗಿಡಗಳಿಗೆ ಕಟ್ಟಿ ವೃಕ್ಷ ಸಂರಕ್ಷಣೆ ಪ್ರತಿಜ್ಞೆ ಮಾಡಿದರು.

ವಿದ್ಯಾರ್ಥಿನಿ ಅಹಲ್ಯ ಪರಿಸರ ಭಾವಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ರಿತಿಕಾ ವೃಕ್ಷಾಬಂಧನದ ಮಹತ್ವ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ವೇದಿಕೆಯಲ್ಲಿ ಕಲಾ ಸಂಘದ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್, ಕಲಾಸಿಂಧು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾರ್ಥಿನಿ ಶ್ರೀಪ್ರಿಯಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಚನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅನ್ನಪೂರ್ಣ ಸ್ವಾಗತಿಸಿ, ಸಮೃದ್ಧಿ ವಂದಿಸಿದರು.

Related posts

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya
error: Content is protected !!