ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Leave a Comment

error: Content is protected !!