July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.12ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ನ್ಯಾಯವಾದಿ ಭಗೀರಥ ಜಿ ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2022-23ನೇ ಸಾಲಿನಲ್ಲಿ ಸಂಘವು ರೂ.114ಕೋಟಿ ವ್ಯವಹಾರ ನಡೆಸಿ, ರೂ.54.80 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡುವುದಾಗಿ ಘೋಷಿಸಿದರು.


ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅತೀ ಹೆಚ್ಚು ಪಿಗ್ಮಿ ಸಂಗ್ರಹಣೆ ಮಾಡಿದ ಆನಂದ ಕೋಟ್ಯಾನ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ರೈತರಿಗೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾ ದ ಚಂದ್ರಶೇಖರ ಮತ್ತು ತಂಡದವರು ಮಾಹಿತಿ ನೀಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷೆ ಸುಜಿತಾ.ವಿ.ಬಂಗೇರ ನಿರ್ದೇಶಕರುಗಳಾದ ,  ನಾರಾಯಣ ರಾವ್ ಮುಗುಳಿ ವಡಿವೇಲು, ಶಾರದಾ, ಗೋಪಿನಾಥ ನಾಯಕ್, ಭುಜಂಗ ಕೆ ಶೆಟ್ಟಿ, ಚಂದ್ರರಾಜ್, ಪುರಂದರ ಶೆಟ್ಟಿ, ಹರೀಶ್ಚಂದ್ರ,ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಸಂಘದ ಸದಸ್ಯರು,ನ ಸಿಬ್ಬಂದಿಗಳು ಸಭೆಯಲ್ಲಿ  ಉಪಸ್ಥಿತರಿದ್ದರು. ನಿರ್ದೇಶಕರಾದ ಸಚಿನ್ ಕುಮಾರ್ ನೂಜೋಡಿ ಧನ್ಯವಾದವಿತ್ತರು.

Related posts

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!