26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಡ: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಸಂಘದ ವಠಾರದಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ವಹಿಸಿದ್ದರು. ವಿಸ್ತರಣಾಧಿಕಾರಿ ಯಮುನಾ ಉಪಸ್ಥಿತರಿದ್ದರು. ಸಂಘವು ರೂ. 4,56,947.15 ಲಾಭ ಬಂದಿದ್ದು, ಸಂಘದ ಸದಸ್ಯರಿಗೆ ಒಟ್ಟು ರೂ. 2,18,300 ಬೋನಸ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ 7 ಸದಸ್ಯರ ಮಕ್ಕಳಿಗೆ ಸಹಾಯಧನ ವಿತರಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರವೀಣ್ ವಿ.ಜಿ, ದ್ವಿತೀಯ ದಿವಾಕರ ಸಾಲ್ಯಾನ್, ತೃತೀಯ ಆಶ್ರಯ ಅಜ್ರಿ ಮೂಡಬೆಟ್ಟು ಇವರುಗಳನ್ನು ಸನ್ಮಾನಿಸಲಾಯಿತು.


ನಿರ್ದೇಶಕರಾದ ನಾಭಿರಾಜ ಜೈನ್, ದಿವಾಕರ ಸಾಲ್ಯಾನ್, ದೇಜಪ್ಪ ಶೆಟ್ಟಿ, ಪುರುಷೋತ್ತಮ ಗೌಡ, ಬೇಬಿ ಶೆಟ್ಟಿ, ಕೃಷ್ಣಪ್ಪ ಗೌಡ, ಸುಂದರ ನಾಕ್, ಸಂತೋಷ್ ಸುರ್ಯ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಶಾಂತಿ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಸುಮಿತ್ರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಶೆಟ್ಟಿ ಧನ್ಯವಾದವಿತ್ತರು.

Related posts

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya
error: Content is protected !!