23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಡ: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಸಂಘದ ವಠಾರದಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ವಹಿಸಿದ್ದರು. ವಿಸ್ತರಣಾಧಿಕಾರಿ ಯಮುನಾ ಉಪಸ್ಥಿತರಿದ್ದರು. ಸಂಘವು ರೂ. 4,56,947.15 ಲಾಭ ಬಂದಿದ್ದು, ಸಂಘದ ಸದಸ್ಯರಿಗೆ ಒಟ್ಟು ರೂ. 2,18,300 ಬೋನಸ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ 7 ಸದಸ್ಯರ ಮಕ್ಕಳಿಗೆ ಸಹಾಯಧನ ವಿತರಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರವೀಣ್ ವಿ.ಜಿ, ದ್ವಿತೀಯ ದಿವಾಕರ ಸಾಲ್ಯಾನ್, ತೃತೀಯ ಆಶ್ರಯ ಅಜ್ರಿ ಮೂಡಬೆಟ್ಟು ಇವರುಗಳನ್ನು ಸನ್ಮಾನಿಸಲಾಯಿತು.


ನಿರ್ದೇಶಕರಾದ ನಾಭಿರಾಜ ಜೈನ್, ದಿವಾಕರ ಸಾಲ್ಯಾನ್, ದೇಜಪ್ಪ ಶೆಟ್ಟಿ, ಪುರುಷೋತ್ತಮ ಗೌಡ, ಬೇಬಿ ಶೆಟ್ಟಿ, ಕೃಷ್ಣಪ್ಪ ಗೌಡ, ಸುಂದರ ನಾಕ್, ಸಂತೋಷ್ ಸುರ್ಯ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಶಾಂತಿ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಸುಮಿತ್ರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಶೆಟ್ಟಿ ಧನ್ಯವಾದವಿತ್ತರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!