ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಡ: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಸಂಘದ ವಠಾರದಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ವಹಿಸಿದ್ದರು. ವಿಸ್ತರಣಾಧಿಕಾರಿ ಯಮುನಾ ಉಪಸ್ಥಿತರಿದ್ದರು. ಸಂಘವು ರೂ. 4,56,947.15 ಲಾಭ ಬಂದಿದ್ದು, ಸಂಘದ ಸದಸ್ಯರಿಗೆ ಒಟ್ಟು ರೂ. 2,18,300 ಬೋನಸ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ 7 ಸದಸ್ಯರ ಮಕ್ಕಳಿಗೆ ಸಹಾಯಧನ ವಿತರಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರವೀಣ್ ವಿ.ಜಿ, ದ್ವಿತೀಯ ದಿವಾಕರ ಸಾಲ್ಯಾನ್, ತೃತೀಯ ಆಶ್ರಯ ಅಜ್ರಿ ಮೂಡಬೆಟ್ಟು ಇವರುಗಳನ್ನು ಸನ್ಮಾನಿಸಲಾಯಿತು.


ನಿರ್ದೇಶಕರಾದ ನಾಭಿರಾಜ ಜೈನ್, ದಿವಾಕರ ಸಾಲ್ಯಾನ್, ದೇಜಪ್ಪ ಶೆಟ್ಟಿ, ಪುರುಷೋತ್ತಮ ಗೌಡ, ಬೇಬಿ ಶೆಟ್ಟಿ, ಕೃಷ್ಣಪ್ಪ ಗೌಡ, ಸುಂದರ ನಾಕ್, ಸಂತೋಷ್ ಸುರ್ಯ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಶಾಂತಿ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಸುಮಿತ್ರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಶೆಟ್ಟಿ ಧನ್ಯವಾದವಿತ್ತರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!